ಅಕ್ರಮವಾಗಿ ಸಂಗ್ರಹಿಸಿದ ರೂ.2.41 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ
ಹಾವೇರಿ:.22: ಅಕ್ರಮವಾಗಿ ಸಂಗ್ರಹಿಸಿದ 107 ಕ್ವಿಂಟಲ್ ಪಡಿತರ ಅಕ್ಕಿಯನ್ನು ಜಿಲ್ಲಾ ಚುನಾವಣಾ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಗುರುವಾರ ರಾತ್ರಿ ಹಾನಗಲ್ ತಾಲೂಕು ಅಕ್ಕಿ ಆಲೂರಿನಲ್ಲಿ ವಶಪಡಿಸಿಕೊಂಡು ದೂರು ದಾಖಲಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಶಿರಸಿ ರಸ್ತೆಯ ನಾಲ್ಕರ ಕ್ರಾಸ್ನಿಂದ ಅಕ್ಕಿಆಲೂರು ಕಡೆಗೆ ಹೋಗುವ ರಸ್ತೆಯಲ್ಲಿ ಶಿವಯೊಗೆಪ್ಪ ಉಪ್ಪಿನ ಇವರಿಗೆ ಸೇರಿದ ಜಮೀನಿನಲ್ಲಿನ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ 2,41,425/- ರೂ. ಮೌಲ್ಯದ ಅಂದಾಜು 107.30 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ ಸಾಗಾಣಿಕೆಗೆ ಬಳಸುತ್ತಿದ್ದ ರೂ.5 ಲಕ್ಷ ಒಂದು ಲಾರಿ ಜಪ್ತಿಮಾಡಲಾಗಿದೆ.
ಆರೋಪಿತರಾದ ಶಿವಯೋಗೆಪ್ಪ ಉಪ್ಪಿನ, ಪಾಂಡುರಂಗ ಸೋನಾವಾನೆ ಹಾಗೂ ಬೈಜನಾಥ ಸೋನಾವಾನೆ ಇವರ ವಿರುದ್ಧ ದೂರು ದಾಖಲಿಸಲಾಗಿದೆ. ದಾಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿದರ್ೆಶಕರಾದ ವಿನೋದ ಹೆಗ್ಗಳಗಿ, ಹಾನಗಲ್ ತಹಶೀಲ್ದಾರ ಗಂಗಣ್ಣ ಹಾಗೂ ಇತರ ಅಧಿಕಾರಿಗಳು ಭಾಗವಹಿಸಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 