ಅಕ್ರಮವಾಗಿ ಸಂಗ್ರಹಿಸಿದ ರೂ.2.41 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ
ಹಾವೇರಿ:.22: ಅಕ್ರಮವಾಗಿ ಸಂಗ್ರಹಿಸಿದ 107 ಕ್ವಿಂಟಲ್ ಪಡಿತರ ಅಕ್ಕಿಯನ್ನು ಜಿಲ್ಲಾ ಚುನಾವಣಾ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಗುರುವಾರ ರಾತ್ರಿ ಹಾನಗಲ್ ತಾಲೂಕು ಅಕ್ಕಿ ಆಲೂರಿನಲ್ಲಿ ವಶಪಡಿಸಿಕೊಂಡು ದೂರು ದಾಖಲಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಶಿರಸಿ ರಸ್ತೆಯ ನಾಲ್ಕರ ಕ್ರಾಸ್ನಿಂದ ಅಕ್ಕಿಆಲೂರು ಕಡೆಗೆ ಹೋಗುವ ರಸ್ತೆಯಲ್ಲಿ ಶಿವಯೊಗೆಪ್ಪ ಉಪ್ಪಿನ ಇವರಿಗೆ ಸೇರಿದ ಜಮೀನಿನಲ್ಲಿನ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ 2,41,425/- ರೂ. ಮೌಲ್ಯದ ಅಂದಾಜು 107.30 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ ಸಾಗಾಣಿಕೆಗೆ ಬಳಸುತ್ತಿದ್ದ ರೂ.5 ಲಕ್ಷ ಒಂದು ಲಾರಿ ಜಪ್ತಿಮಾಡಲಾಗಿದೆ.
ಆರೋಪಿತರಾದ ಶಿವಯೋಗೆಪ್ಪ ಉಪ್ಪಿನ, ಪಾಂಡುರಂಗ ಸೋನಾವಾನೆ ಹಾಗೂ ಬೈಜನಾಥ ಸೋನಾವಾನೆ ಇವರ ವಿರುದ್ಧ ದೂರು ದಾಖಲಿಸಲಾಗಿದೆ. ದಾಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿದರ್ೆಶಕರಾದ ವಿನೋದ ಹೆಗ್ಗಳಗಿ, ಹಾನಗಲ್ ತಹಶೀಲ್ದಾರ ಗಂಗಣ್ಣ ಹಾಗೂ ಇತರ ಅಧಿಕಾರಿಗಳು ಭಾಗವಹಿಸಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 