‘ಆಯುಷ್ ವೈದ್ಯಾಧಿಕಾರಿಗಳ ಮುಂಬಡ್ತಿಗೆ ವೃಂದ ಮತ್ತು ನೇಮಕಾತಿ ನಿಯಮಗಳ ಪರಿಷ್ಕರಣೆಗೆ ಕ್ರಮ’
‘Action to revise the cadre and recruitment rules for the advancement of AYUSH medical officers’
ಬೆಳಗಾವಿ, ಸುವರ್ಣ ವಿಧಾನಸೌಧ ಡಿ.18: ಆಯುಷ್ ಇಲಾಖೆಯಲ್ಲಿನ ವೈದ್ಯಾಧಿಕಾರಿಗಳ ಹುದ್ದೆಯಿಂದ ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗೆ ಮುಂಬಡ್ತಿ ನೀಡುವುದಕ್ಕೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬಸವನಗುಡಿ ಶಾಸಕ ರವಿ ಸುಬ್ರಮಣ್ಯ ಎಲ್.ಎ. ಅವರ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿದರು.
ಆಯುಷ್ ಇಲಾಖೆಯಲ್ಲಿ ವೈದ್ಯಾಧಿಕಾರಿಗಳ ಹುದ್ದೆಯಿಂದ ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗೆ ಮುಂಬಡ್ತಿ ಮೂಲಕ ಒಟ್ಟು 95 ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ಇದರಲ್ಲಿ 65 ಆಯುರ್ವೇದ, 15-ಯುನಾನಿ, 12-ಹೋಮಿಯೋಪಥಿ ಹಾಗೂ ಪ್ರಕೃತಿ ಚಿಕಿತ್ಸೆ ಮತ್ತು ಯೋಗದ 03 ವೈದ್ಯರಿಗೆ ಮುಂಬಡ್ತಿ ನೀಡಬೇಕಿದೆ. ಇಲಾಖೆಯಲ್ಲಿ 116 ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗಳು ಮಂಜೂರಾಗಿದ್ದು, ಕಳೆದ ಆರೇಳು ರ್ವುಗಳಿಂದ ಹಿರಿಯ ವೈದ್ಯಾಧಿಕಾರಿಗಳ ವೃಂದದಲ್ಲಿ ಹುದ್ದೆಗಳು ಖಾಲಿ ಇವೆ. ವೈದ್ಯಾಧಿಕಾರಿಗಳಿಗೆ ಸ್ಥಾನಪನ್ನ ಬಡ್ತಿ ನೀಡುವುದಕ್ಕೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗಿದ್ದು, ಬಳಿಕ ಮುಂಬಡ್ತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 