‘ಕೇಂದ್ರ, ರಾಜ್ಯ ಸರ್ಕಾರಗಳು ಆವರ್ತನಿಧಿ ಸ್ಥಾಪಿಸಲಿ’
‘Central and state governments should establish a rotation schedule’
ದಾವಣಗೆರೆ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಅನುಕೂಲಕ್ಕಾಗಿ ಆವರ್ತನಿಧಿ ಸ್ಥಾಪನೆ ಮಾಡಬೇಕು ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು. ಅವರು ಶನಿವಾರ (ಜ.17) ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಎರಡು ಲಕ್ಷ ಕೋಟಿ ಅನುದಾನ ಇಟ್ಟು ಆವರ್ತನಿಧಿ ಸ್ಥಾಪಿಸಿದರೆ, ರಾಜ್ಯ ಸರ್ಕಾರ 10,000 ಕೋಟಿ ಅನುದಾನ ಆವರ್ತನಿಧಿಗಾಗಿ ಇಡಬೇಕು ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆವರ್ತ ನಿಧಿ ಇಟ್ಟು ಕೃಷಿ ಉತ್ಪನಗಳನ್ನು ಬೆಂಬಲ ಬೆಲೆಯಡಿ ಖರೀದಿಸಲು ವರ್ಷವಿಡೀ ಖರೀದಿ ಕೇಂದ್ರಗಳನ್ನು ತೆರೆಯಬೇಕು. ರೈತರು ತಮ್ಮ ಬೆಳೆಗಳನ್ನು ತಮಗೆ ಬೇಕಾದಾಗ ಬೆಂಬಲ ಬೆಲೆಯಡಿ ಮಾರಾಟ ಮಾಡಿ ಅನುಕೂಲ ಮಾಡಿಕೊಳ್ಳುತ್ತಾರೆ ಎಂದರು.
ಮಾರುಕಟ್ಟೆಯಲ್ಲಿ ರೈತರ ಉತ್ಪನ್ನ ಖಾಲಿಯಾದ ಮೇಲೆ ಖರೀದಿ ಕೇಂದ್ರಗಳನ್ನು ತೆರೆದು ವ್ಯಾಪಾರಸ್ಥರಿಗೆ ಲಾಭ ಮಾಡಿಕೊಡುವ ಸರ್ಕಾರದ ನೀತಿಯಿಂದ ರೈತರಿಗೆ ಆಗುವ ಆರ್ಥಿಕ ನಷ್ಟ ಆವರ್ತನಿಧಿ ಸ್ಥಾಪನೆಯಿಂದ ತಡೆಯಬಹುದು ಎಂದರು.
ಕೃಷಿ ಸಾಲ ನೀಡಲು ಬ್ಯಾಂಕ್ಗಳಲ್ಲಿ ಸಿಬಿಲ್ ಸ್ಕೋರ್ ಅನ್ವಯಿಸಬಾರದು. ರೈತರ ಕೃಷಿ ಸಾಲವನ್ನು ಸಿಬಿಲ್ ಸ್ಕೋರ್ನಿಂದ ಸಂಪೂರ್ಣವಾಗಿ ಹೊರಗಿಡಬೇಕು. ಈ ವ್ಯವಸ್ಥೆ ಇಡೀ ದೇಶದಲ್ಲಿಯೇ ಆಗಬೇಕು. ದೇಶಕ್ಕೆ ಅನ್ನ ನೀಡುವ ರೈತರಿಗೆ ಅಗತ್ಯಕ್ಕೆ ತಕ್ಕಷ್ಟುಸಾಲ ನೀಡುವಂತಾಗಬೇಕು ಎಂದರು.
ರಾಜ್ಯದಲ್ಲಿ ಬೆಳೆದಿರುವ ಮೆಕ್ಕೆಜೋಳ ಸರಾಸರಿ ಇಳುವರಿ ಆಧಾರದಲ್ಲಿ ಈಗಾಗಲೇ ಮಾರಾಟ ಮಾಡಿದ ರೈತರಿಗೂ ಬೆಂಬಲ ಬೆಲೆ ವ್ಯತ್ಯಾಸದ ಹಣ ಕೊಡುವ ವ್ಯವಸ್ಥೆಯಾಗಬೇಕು ಎಂದು ಕೋಡಿಹಳ್ಳಿ ಚಂದ್ರಶೇಖರ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 