‘ಕೇಂದ್ರ, ರಾಜ್ಯ ಸರ್ಕಾರಗಳು ಆವರ್ತನಿಧಿ ಸ್ಥಾಪಿಸಲಿ’
‘Central and state governments should establish a rotation schedule’
ದಾವಣಗೆರೆ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಅನುಕೂಲಕ್ಕಾಗಿ ಆವರ್ತನಿಧಿ ಸ್ಥಾಪನೆ ಮಾಡಬೇಕು ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು. ಅವರು ಶನಿವಾರ (ಜ.17) ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಎರಡು ಲಕ್ಷ ಕೋಟಿ ಅನುದಾನ ಇಟ್ಟು ಆವರ್ತನಿಧಿ ಸ್ಥಾಪಿಸಿದರೆ, ರಾಜ್ಯ ಸರ್ಕಾರ 10,000 ಕೋಟಿ ಅನುದಾನ ಆವರ್ತನಿಧಿಗಾಗಿ ಇಡಬೇಕು ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆವರ್ತ ನಿಧಿ ಇಟ್ಟು ಕೃಷಿ ಉತ್ಪನಗಳನ್ನು ಬೆಂಬಲ ಬೆಲೆಯಡಿ ಖರೀದಿಸಲು ವರ್ಷವಿಡೀ ಖರೀದಿ ಕೇಂದ್ರಗಳನ್ನು ತೆರೆಯಬೇಕು. ರೈತರು ತಮ್ಮ ಬೆಳೆಗಳನ್ನು ತಮಗೆ ಬೇಕಾದಾಗ ಬೆಂಬಲ ಬೆಲೆಯಡಿ ಮಾರಾಟ ಮಾಡಿ ಅನುಕೂಲ ಮಾಡಿಕೊಳ್ಳುತ್ತಾರೆ ಎಂದರು.
ಮಾರುಕಟ್ಟೆಯಲ್ಲಿ ರೈತರ ಉತ್ಪನ್ನ ಖಾಲಿಯಾದ ಮೇಲೆ ಖರೀದಿ ಕೇಂದ್ರಗಳನ್ನು ತೆರೆದು ವ್ಯಾಪಾರಸ್ಥರಿಗೆ ಲಾಭ ಮಾಡಿಕೊಡುವ ಸರ್ಕಾರದ ನೀತಿಯಿಂದ ರೈತರಿಗೆ ಆಗುವ ಆರ್ಥಿಕ ನಷ್ಟ ಆವರ್ತನಿಧಿ ಸ್ಥಾಪನೆಯಿಂದ ತಡೆಯಬಹುದು ಎಂದರು.
ಕೃಷಿ ಸಾಲ ನೀಡಲು ಬ್ಯಾಂಕ್ಗಳಲ್ಲಿ ಸಿಬಿಲ್ ಸ್ಕೋರ್ ಅನ್ವಯಿಸಬಾರದು. ರೈತರ ಕೃಷಿ ಸಾಲವನ್ನು ಸಿಬಿಲ್ ಸ್ಕೋರ್ನಿಂದ ಸಂಪೂರ್ಣವಾಗಿ ಹೊರಗಿಡಬೇಕು. ಈ ವ್ಯವಸ್ಥೆ ಇಡೀ ದೇಶದಲ್ಲಿಯೇ ಆಗಬೇಕು. ದೇಶಕ್ಕೆ ಅನ್ನ ನೀಡುವ ರೈತರಿಗೆ ಅಗತ್ಯಕ್ಕೆ ತಕ್ಕಷ್ಟುಸಾಲ ನೀಡುವಂತಾಗಬೇಕು ಎಂದರು.
ರಾಜ್ಯದಲ್ಲಿ ಬೆಳೆದಿರುವ ಮೆಕ್ಕೆಜೋಳ ಸರಾಸರಿ ಇಳುವರಿ ಆಧಾರದಲ್ಲಿ ಈಗಾಗಲೇ ಮಾರಾಟ ಮಾಡಿದ ರೈತರಿಗೂ ಬೆಂಬಲ ಬೆಲೆ ವ್ಯತ್ಯಾಸದ ಹಣ ಕೊಡುವ ವ್ಯವಸ್ಥೆಯಾಗಬೇಕು ಎಂದು ಕೋಡಿಹಳ್ಳಿ ಚಂದ್ರಶೇಖರ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 