‘ಯುವ ನಾಗರಿಕರಿಗಾಗಿ ಹಣಕಾಸು ಶಿಕ್ಷಣ’ : ವಿದ್ಯಾರ್ಥಿ ಅಭಿವೃದ್ದಿ ಕಾರ್ಯಕ್ರಮ
‘Financial Education for Young Citizens’: Student Development Program
ಗದಗ 23: ನಗರದ ಕೆ.ಎಲ್.ಇ ಸಂಸ್ತೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಾಣಿಜ್ಯ ವಿಭಾಗವು ‘ಯುವ ನಾಗರಿಕರಿಗಾಗಿ ಹಣಕಾಸು ಶಿಕ್ಷಣ’ ಕುರಿತಾದ ಎರಡು ದಿನಗಳ ವಿದ್ಯಾರ್ಥಿ ಅಭಿವೃದ್ದಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶ್ರೀ ರವಿ ಹುಚ್ಚನ್ನವರ ಅವರು ಹಣಕಾಸಿನ ಮಾರುಕಟ್ಟೆ, ಪ್ರಾಥಮಿಕ ಸಾರ್ವಜನಿಕ ಹಂಚಿಕೆ, ಡಿಮ್ಯಾಟ್ ಖಾತೆ ತೆರೆಯುವಿಕೆ, ಕೆ.ವೈ.ಸಿ ಮಾಡುವ ವಿಧಾನ, ಲೈವ್ ಮಾರ್ಕೆಟ್ ಟ್ರೇಡಿಂಗ್ ಬಿ.ಎಸ್.ಇ, ಎನ್.ಎಸ್.ಇ ಸೂಚ್ಯಂಕಗಳು, ಮ್ಯೂಚ್ಯೂವಲ್ ಫಂಡ್, ಶೇರು ಮಾರುಕಟ್ಟೆಯಲ್ಲಿ ಉದ್ಯೋಗವಕಾಶಗಳು ಹಾಗೂ ಹಣಕಾಸಿನ ಮೋಸಗಳ ಬಗ್ಗೆ ಜಾಗೃತೆ ವಹಿಸಲು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎ.ಕೆ. ಮಠ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ. ಹರ್ಷ ನಿಲೂಗಲ್ ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಶ್ವೇತಾ ರಾಚಯ್ಯನವರ ಅತಿಥಿಗಳನ್ನು ಪರಿಚಯಿಸಿದರು. ಪ್ರೊ. ವಾಗೀಶ್ ರೇಶ್ಮೆ ಎಲ್ಲರಿಗೂ ವಂದಿಸಿದರು. ಮಹಾವಿದ್ಯಾಲಯದ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 