ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ‘ಸರ್ವ ಸದಸ್ಯರ ಮಹಾಸಭೆ’

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ‘ಸರ್ವ ಸದಸ್ಯರ ಮಹಾಸಭೆ’ ‘General Body Meeting’ of the Karnataka State Government Employees’ Association

ಲೋಕದರ್ಶನ ವರದಿ 

ಹೊಸಪೇಟೆ 06;  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ‘ಸರ್ವ ಸದಸ್ಯರ ಮಹಾಸಭೆ’ಯನ್ನು ದಿನಾಂಕ 08.07.2026 ರಂದು ಬುಧವಾರ ಸಂಜೆ 6:00 ಗಂಟೆಗೆ ಹೊಸಪೇಟೆಯ ರೋಟರಿ ಕ್ಲಬ್ ಸ್ಟೇಷನ್ ರಸ್ತೆಯಲ್ಲಿ ಆಯೋಜಿಸಲಾಗಿದೆ.  ಈ ಮಹಾಸಭೆ ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಗೌಡ ಜಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.  ಸಂಘದ ಮುಂದಿನ ಕಾರ್ಯಕ್ರಮಗಳು ಹಾಗೂ ಸಂಘಟನೆಯ ಬಲವರ್ಧನೆ ಸಂಬಂಧಿತ ಪ್ರಮುಖ ವಿಷಯಗಳನ್ನು ಈ ಸಭೆಯಲ್ಲಿ ಚರ್ಚಿಸಲಾಗುವುದು. ಜೊತೆಗೆ, ದಿನಾಂಕ 11.07.2026 ರಂದು ಅರಣ್ಯ ಮೈದಾನ, ಬೆಂಗಳೂರುನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ‘ನಮ್ಮ ಅಭಿಮಾನದ ಅಭಿನಂದನೆ’ ಕಾರ್ಯಕ್ರಮದ ಕುರಿತು ಮಾಹಿತಿ ನೀಡಲಾಗುತ್ತದೆ.  ಈ ಸಂದರ್ಭದಲ್ಲಿ ಸರ್ಕಾರಿ ನೌಕರರಿಗಾಗಿ ಜಾರಿಯಲ್ಲಿರುವ ಓಕಖ ರದ್ದುಪಡಿಸಿ ಓಕಖ ಜಾರಿಗೆ ಒತ್ತಾಯಿಸುವ ನಿರ್ಣಯವನ್ನೂ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಸಂಘದ ಮೂಲಗಳು ತಿಳಿಸಿವೆ.