‘ಶಿಕ್ಷಣದಲ್ಲಿ ಸಹಪಠ್ಯ ಚಟುವಟಿಕೆ ಮಹತ್ವ’ ಕಾರ್ಯಕ್ರಮ
‘Importance of Co-curricular Activities in Education’ program
ಲೋಕದರ್ಶನ ವರದಿ
ಧಾರವಾಡ 24: ಸಹಪಠ್ಯದಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಬದುಕುವ ಕಲೆ ಕರಗತವಾಗುವುದು. ಸಹಜೀವನ ಹಾಗೂ ಸಹಬಾಳ್ವೆ, ಶಿಸ್ತು, ಶಾಲಾಭಿಮಾನ ಮುಂತಾದ ಉದಾತ್ತ ಮೂಲಗಳನ್ನು ಸಹಪಠ್ಯ ಚಟುವಟಿಕೆಗಳು ಕಲಿಸುತ್ತವೆ ಎಂದು ಹುಬ್ಬಳ್ಳಿಯ ಕನಕದಾಸ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ರವೀಂದ್ರನಾಥ ಬಿ. ದಂಡಿನ ಅಭಿಪ್ರಾಯಪಟ್ಟರು
ಅವರು ಹುಬ್ಬಳ್ಳಿಯ ವಿಜಯನಗರ ಪದವಿ ಪೂರ್ವ ಕಾಲೇಜಿನಲ್ಲಿ ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪವು ಆಯೋಜಿಸಿದ್ದ ‘ಶಿಕ್ಷಣದಲ್ಲಿ ಸಹಪಠ್ಯ ಚಟುವಟಿಕೆ ಮಹತ್ವ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸರ್ಕಾರಿ ಆದರ್ಶ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ನಂದೀಶ ಕಾಖಂಡಕಿ ಸಹಪಠ್ಯಗಳ ಮಹತ್ವ ಕುರಿತು ಉಪನ್ಯಾಸ ನೀಡಿ, ಸಹಪಠ್ಯ ಚಟುವಟಿಕೆಗಳನ್ನು ಎಂದೂ ಪಠ್ಯೇತರ ಎಂದು ಭಾವಿಸಕೂಡದು. ಅವು ಪಠ್ಯದೊಂದಿಗೆ ನಿರಂತರವಾಗಿ ಶಾಲೆಯಲ್ಲಿ ಜರುಗುತ್ತಿರುತ್ತವೆ. ಕಲಿಕೆ ಹರ್ಷದಾಯಕವಾಗಲು ಸಹಪಠ್ಯ ಬೇಕೇ ಬೇಕು. ಸಹಪಠ್ಯದಿಂದ ವಿದ್ಯಾರ್ಥಿಗಳು ನಾಯಕತ್ವದ ಗುಣ, ಸಹಕಾರ, ನೈತಿಕ ಮೌಲ್ಯ, ಪೌರತ್ವ ಮೌಲ್ಯ, ಸಾಮಾಜಿಕ ಮೌಲ್ಯಗಳನ್ನು ಕಲಿಯಲು ಸಾಧ್ಯ ಎಂದು ಹೇಳಿದರು
ಕವಿವ ಸಂಘದ ಕೋಶಾಧ್ಯಕ್ಷ ಸತೀಶ ತುರಮರಿ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ, ಸಮತೋಲನ ವ್ಯಕ್ತಿತ್ವ, ಉತ್ತಮ ಸಂಸ್ಕಾರ ಹೊಂದಲು ಸಹ ಪಠ್ಯ ಚಟುವಟಿಕೆಗಳು ಪೂರಕವಾಗಿವೆ ಎಂದು ಹೇಳಿದರು.
ಹುಬ್ಬಳ್ಳಿಯ ವಿಜಯನಗರ ಪದವಿಪೂರ್ವ ಮಹಾವಿದ್ಯಾಲಯದ ಸಂದೀಪ ಬೂದಿಹಾಳ ಅಧ್ಯಕ್ಷತೆ ವಹಿಸಿದ್ದರು
ಡಿ.ಜಿ ಹುಗ್ಗಿ ಸ್ವಾಗತಿಸಿದರು. ಡಾ. ಎ.ಎಸ್. ಗಡಾದ ನಿರೂಪಿಸಿದರು. ಕ.ವಿ.ವ. ಸಂಘದ ಶಿಕ್ಷಣ ಮಂಟಪದ ಸಂಚಾಲಕ ವೀರಣ್ಣ ಒಡ್ಡೀನ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಎ. ನಾಯ್ಕರ ವಂದಿಸಿದರು. ಉಪನ್ಯಾಸಕರಾದ ಅಶೋಕ ಚಂಚಿ, ಎನ್.ಡಿ. ಹಾದಿಮನಿ, ಎಸ್.ಬಿ. ಮಾಸಗೊನೆ, ಪಾರ್ವತಿ ಕುಲ್ಲೊಳ್ಳಿ ಸೇರಿದಂತೆ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 