ವಿಜಯಪುರ 19. ದೇಶದ ಅಭಿವೃದ್ಧಿಯಲ್ಲಿ ಆರ್ಥಿಕ, ಆರೋಗ್ಯ, ಶಿಕ್ಷಣ ಮತ್ತು ಸಂಶೋಧನೆ ಕ್ಷೇತ್ರಗಳು ಪ್ರಮುಖವಾಗಿದ್ದು. ಇವುಗಳಲ್ಲಿ ಫಾರ್ಮಸಿ ಮತ್ತು ಮೆಡಿಕೇಶನ್ ಮುಖ್ಯ ಪಾತ್ರ ವಹಿಸುತ್ತವೆ ಎಂದು ರಾಜ್ಯ ಅಕ್ಕ ಮಹಾದೇವಿ ವಿಶ್ವವಿದ್ಯಾಲಯದ ಕುಲಪತಿ ಡಾ. ಶಾಂತಾದೇವಿ ಟಿ ಹೇಳಿದ್ದಾರೆ.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಎಸ್.ಎಂ ಓಷಧ ವಿಜ್ಞಾನ ಮಹಾವಿದ್ಯಾಲಯ ಮತ್ತು ಸಂಶೋಧನ ಕೇಂದ್ರದಲ್ಲಿ ಮಂಗಳವಾರ ನಡೆದ ‘ಪದವಿ ಪ್ರದಾನ’ (ಉಡಿಚಿಜಣಚಿಣಠ ಆಚಿಥಿ) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆರೋಗ್ಯ ರಕ್ಷಣೆಯಲ್ಲಿ ವೈದ್ಯರ ಜೊತೆ ಫಾರ್ಮಸಿಸ್ಟ್ರೂ ಸಮಾನ ಸೇವೆ ಸಲ್ಲಿಸುತ್ತಾರೆ. ಆದ್ದರಿಂದ ಫಾರ್ಮಸಿ ವಿದ್ಯಾರ್ಥಿಗಳು ಕೂಡ ಹೊಸ ಸಂಶೋಧನೆಗಳು ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ಜನರ ಆರೋಗ್ಯದ ಗುಣಮಟ್ಟವನ್ನು ಸುಧಾರಿಸಲು ಶ್ರಮಿಸಬೇಕು ಎಂದು ಅವರು ಹೇಳಿದರು.
ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಫಾರ್ಮಸಿ ವಿಭಾಗದ ಅಧ್ಯಯನ ಮಂಡಳಿ ಅಧ್ಯಕ್ಷ ಮತ್ತು ಮಂಗಳೂರಿನ ಪಿ. ಎ. ಓಷಧ ವಿಜ್ಞಾನ ಮಹಾವಿದ್ಯಾಲಯ ಪ್ರಾಂಶುಪಾಲ ಡಾ. ಸಲೀಮುಲ್ಲಾ ಖಾನ್ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ಫಾರ್ಮಸಿಸ್ಟ್ಗಳು ಪ್ರಾಣರಕ್ಷಕ ಓಷಧಿಗಳನ್ನು ತಯಾರಿಸಿ, ರೋಗಿಗಳಿಗೆ ವಿತರಿಸುವ ಮೂಲಕ ಉತ್ತಮ ಕೆಲಸ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಫಾರ್ಮಸಿ ವೃತ್ತಿ ಮಹತ್ತರ ಬದಲಾವಣೆಗಳನ್ನು ಕಂಡಿದ್ದು, ಆಸ್ಪತ್ರೆಗಳು ಮತ್ತು ಓಷಧಿ ಉದ್ಯಮವಷ್ಟೇ ಅಲ್ಲ, ಸಾಫ್ಟ್ವೇರ್ ಕ್ಷೇತ್ರಗಳಲ್ಲಿಯೂ ಉದ್ಯೋಗಾವಕಾಶಗಳನ್ನು ಹೆಚ್ಚಿಸಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿ. ಫಾರ್ಮ, ಎಂ. ಫಾರ್ಮ ಹಾಗೂ ಫಾರ್ಮ್ ಡಿ ಪದವೀಧರರಿಗೆ ಪದವಿ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ನಿರ್ದೇಶಕ ಡಾ. ಆರಿ್ಬ. ಕೋಟ್ನಾಳ, ಕಾಲೇಜಿನ ಪ್ರಾಚಾರ್ಯ ಡಾ. ಸಿ. ಮಲ್ಲಿಕಾರ್ಜುನ ಶೆಟ್ಟಿ, ಶೈಕ್ಷಣಿಕ ನಿರ್ವಾಹಕ ಡಾ. ಎಸ್.ಆರ್. ಕರಜಗಿ, ಐ.ಕ್ಯೂ.ಎ.ಸಿ ಸಂಯೋಜಕ ಡಾ. ಬಸವರಾಜ ಹುಣಸಗಿ ಮತ್ತು ಸಾಂಸ್ಕೃತಿಕ ಸಮಿತಿ ಸಂಯೋಜಕ ಸಂಗಪ್ಪ ತೇಲಿ, ಡಾ. ಶ್ರೀಪಾದ ಪೋತದಾರ ಸೇರಿದಂತೆ ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಸ್ವಾಗತಿಸಿದರು.