‘ಶ್ರೀ ಗುರುರಾಜ ಮಂದಿರಂ’ ವಾರ್ಷೀಕೋತ್ಸವ ಸಮಾರಂಭ
‘Sri Gururaja Mandiram’ anniversary celebration
ಲೋಕದರ್ಶನ ವರದಿ
ಬೆಳಗಾವಿ 06: ದಿ. ಕಲ್ಲೋಪಂತ ಅಚ್ಯುತ ಪಾಟೀಲ ಅವರ ನೇತೃತ್ವದಲ್ಲಿ ಸ್ಥಾಪನೆಗೊಂಡಿರುವ ಖಾನಾಪುರ ತಾಲೂಕಿನ ಗಾಡಿಕೊಪ್ಪ ಗ್ರಾಮದಲ್ಲಿರುವ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ ‘ಶ್ರೀ ಗುರುರಾಜ ಮಂದಿರಂ’ ದ 53 ನೇ ವಾರ್ಷೀಕೋತ್ಸವ ಸಮಾರಂಭವನ್ನು ಇದೇ ದಿನಾಂಕ 7 ಶನಿವಾರದಂದು ಶ್ರೀ ಗುರುರಾಜ ಮಂದಿರದಲ್ಲಿ ನಡೆಯಲಿದೆ.
ಇದೇ ಸಂದರ್ಭದಲ್ಲಿ ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಶ್ರೀ ಕೂಡ್ಲಿ ಆರ್ಯ ಅಕ್ಷೊಭ್ಯ ಮಠಾಧೀಶರಾದ ಶ್ರೀ ರಘು ವಿಜಯತೀರ್ಥ ಶ್ರೀಪಾದಂಗಳರಿಂದ ಶ್ರೀ ವೈಕುಂಠ ರಾಮದೇವರ ಸಂಸ್ಥಾನ ಪೂಜೆ ನೆರವೇರಲಿದೆ. ಸದ್ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗಲ್ಗೊಂಡು ಗುರುಗಳ ಪ್ರೀತಿಗೆ ಪಾತ್ರರಾಗಬೇಕೆಂದು ರಾಘವೇಂದ್ರ ಪಾಟೀಲ, ಧೀರೇಂದ್ರ ಪಾಟೀಲ, ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ಅಚ್ಯುತ ಪಾಟೀಲ ಮೊ. 9591754066 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 