‘ವಾತ್ಸಲ್ಯ’ ಮನೆ ಹಸ್ತಾಂತರ ಕಾರ್ಯಕ್ರಮ
‘Vatsalya’ house handover program
‘ವಾತ್ಸಲ್ಯ’ ಮನೆ ಹಸ್ತಾಂತರ ಕಾರ್ಯಕ್ರಮ
ಯರಗಟ್ಟಿ 05: ಅಸಹಾಯಕರಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ನೆರವಾಗುತ್ತಿದೆ ಎಂದು ಸಂಸ್ಥೆಯ ಧಾರವಾಡ ಪ್ರಾದೇಶಿಕ ವಿಭಾಗದ ನಿರ್ದೇಶಕಿ ದಯಾಶೀಲ ಹೇಳಿದರು.
ಸಮೀಪದ ಚಂದರಗಿ ಗ್ರಾಮದ ನಿವಾಸಿ ಶಾಂತವ್ವ ಬಿಜಲಿ ಅವರಿಗಾಗಿ ಗ್ರಾಮಾಭಿವೃದ್ಧಿ ಸಂಸ್ಥೆಯ ಜ್ಞಾನ ವಿಕಾಸ ಯೋಜನೆ ನಿರ್ಮಿಸಿದ್ದ ‘ವಾತ್ಸಲ್ಯ’ ಮನೆ ಹಸ್ತಾಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಚಂದರಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಸಂಜೀವ ಹಳ್ಳಿ ಅಧ್ಯಕ್ಷತೆಯನ್ನು ವಹಿಸಿದ್ದರು. ಮಾತನಾಡಿದ ಅವರು ಧರ್ಮಸ್ಥಳ ಯೋಜನೆ ಯಿಂದ ಅಶಕ್ತರಿಗೆ ಇನ್ನೂ ಹೆಚ್ಚಿನ ಸಹಕಾರ ಸಿಗುವಂತಾಗಲಿ ಎಂದರು.ಪಂಚಾಯಿತಿ ಸದಸ್ಯೆ ಮಾರುತಿ ಜಾದವ, ಮಾಜಿ ಸೈನಿಕ ಬಸವಲಿಂಗಯ್ಯ ಹಿರೇಮಠ, ಯೋಜನೆಯ ಜಿಲ್ಲಾ ನಿರ್ದೇಶಕ ಲವಕುಮಾರ, ತಾಲೂಕಾ ಯೋಜನಾಧಿಕಾರಿ ಶ್ರೀಕಾಂತ ಎಮ್, ಬಾಳನಗೌಡ ಪಾಟೀಲ, ಸ್ಥಳೀಯ ಮೇಲ್ವಿಚಾರಕ ರಾಕೇಶ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ನಿಶಾ ನಾಯ್ಕ, ಸೇವಾ ಪ್ರತಿನಿಧಿ ಸವಿತಾ, ಸೇವಾ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 