“ಜಾಗೃತಿ ಮತ್ತು ಅನುಷ್ಠಾನ” ಕಾರ್ಯಕ್ರಮ
“Awareness and Implementation” Program
ಲೋಕದರ್ಶನ ವರದಿ
ಹಾವೇರಿ 13 : ಹಾವೇರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನಲ್ಲಿ “ಋಖ: ಜಾಗೃತಿ ಮತ್ತು ಅನುಷ್ಠಾನ” ವಿಷಯದ ಮೇಲೆ ಒಂದು ದಿನದ ಕಾರ್ಯಕ್ರಮ ಶುಕ್ರವಾರ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಬೆಂಗಳೂರಿನ ಡೈರೆಕ್ಟರ್ ಡಾ. ಶ್ರೀನಿವಾಸರಾವ ಅವರು ಮಾತನಾಡಿ, ಬೌದ್ಧಿಕ ಸ್ವತ್ತಿನ ಹಕ್ಕುಗಳು ಪೇಟೆಂಟ್ ಸಲ್ಲಿಕೆ ಪ್ರಕ್ರಿಯೆ, ಅದರ ಮಹತ್ವ ಹಾಗೂ ಅನುಷ್ಠಾನದ ಕುರಿತು ವಿವರವಾಗಿ ಮಾಹಿತಿ ನೀಡಿದರು ಹಾಗೂ ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ಸಂಶೋಧನಾ ಆವಿಷ್ಕಾರಗಳನ್ನು ಪೇಟೆಂಟ್ ಮೂಲಕ ರಕ್ಷಿಸುವ ಅಗತ್ಯತೆಯನ್ನು ವಿವರಿಸಿದರು. ಪ್ರಾಂಶುಪಾಲ ಡಾ. ಮುನಿರಾಜು ಎಂ. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಾಗಾರದ ಸಂಯೋಜಕರಾಗಿ ಡಾ. ಹರೀಶ್ ಎಚ್. ಎಂ. ಕಾರ್ಯನಿರ್ವಹಿಸಿದರು. ಈ ಕಾರ್ಯಾಗಾರದಲ್ಲಿ ಕಾಲೇಜಿನ ಎಲ್ಲಾ ವಿಭಾಗಗಳ ಮೂರನೇ ವರ್ಷದ ವಿದ್ಯಾರ್ಥಿಗಳು, ವಿವಿಧ ವಿಭಾಗಗಳ ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಭಾಗವಹಿಸಿ ಋಖ ಕುರಿತು ಮಹತ್ವದ ಮಾಹಿತಿ ಪಡೆದುಕೊಂಡರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 