“ಜಾಗೃತಿ ಮತ್ತು ಅನುಷ್ಠಾನ” ಕಾರ್ಯಕ್ರಮ
“Awareness and Implementation” Program
ಲೋಕದರ್ಶನ ವರದಿ
ಹಾವೇರಿ 13 : ಹಾವೇರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನಲ್ಲಿ “ಋಖ: ಜಾಗೃತಿ ಮತ್ತು ಅನುಷ್ಠಾನ” ವಿಷಯದ ಮೇಲೆ ಒಂದು ದಿನದ ಕಾರ್ಯಕ್ರಮ ಶುಕ್ರವಾರ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಬೆಂಗಳೂರಿನ ಡೈರೆಕ್ಟರ್ ಡಾ. ಶ್ರೀನಿವಾಸರಾವ ಅವರು ಮಾತನಾಡಿ, ಬೌದ್ಧಿಕ ಸ್ವತ್ತಿನ ಹಕ್ಕುಗಳು ಪೇಟೆಂಟ್ ಸಲ್ಲಿಕೆ ಪ್ರಕ್ರಿಯೆ, ಅದರ ಮಹತ್ವ ಹಾಗೂ ಅನುಷ್ಠಾನದ ಕುರಿತು ವಿವರವಾಗಿ ಮಾಹಿತಿ ನೀಡಿದರು ಹಾಗೂ ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ಸಂಶೋಧನಾ ಆವಿಷ್ಕಾರಗಳನ್ನು ಪೇಟೆಂಟ್ ಮೂಲಕ ರಕ್ಷಿಸುವ ಅಗತ್ಯತೆಯನ್ನು ವಿವರಿಸಿದರು. ಪ್ರಾಂಶುಪಾಲ ಡಾ. ಮುನಿರಾಜು ಎಂ. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಾಗಾರದ ಸಂಯೋಜಕರಾಗಿ ಡಾ. ಹರೀಶ್ ಎಚ್. ಎಂ. ಕಾರ್ಯನಿರ್ವಹಿಸಿದರು. ಈ ಕಾರ್ಯಾಗಾರದಲ್ಲಿ ಕಾಲೇಜಿನ ಎಲ್ಲಾ ವಿಭಾಗಗಳ ಮೂರನೇ ವರ್ಷದ ವಿದ್ಯಾರ್ಥಿಗಳು, ವಿವಿಧ ವಿಭಾಗಗಳ ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಭಾಗವಹಿಸಿ ಋಖ ಕುರಿತು ಮಹತ್ವದ ಮಾಹಿತಿ ಪಡೆದುಕೊಂಡರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 