“ಗೌರವಹಿಘನತೆಯೇ ಮಾನವ ಹಕ್ಕಿನ ಮೂಲ: ಕರೆಪ್ಪ ಬೆಳ್ಳಿ”
“Indignity is the root of human rights: Kareppa Belli”
ಸಿಂದಗಿ 12 : ಮನುಷ್ಯನಿಗೆ ಮೊದಲು ಗೌರವ ಮತ್ತು ಘನತೆ ಇರಬೇಕು. ಜಾತಿಹಿಧರ್ಮ ಯಾವ ಬೇಧ ಭಾವವೂ ಇಲ್ಲದೆ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳಿವೆ. ನಾವು ಎಲ್ಲರೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ತಾಲೂಕು ತಹಶೀಲ್ದಾರ ಕರೆಪ್ಪ ಬೆಳ್ಳಿ ಹೇಳಿದರು.
ನಗರದ ಸಂಗಮ ಸಂಸ್ಥೆ, ಸಿಂದಗಿ ಇವರ ವತಿಯಿಂದ ಮಾನವ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮಾನವ ಹಕ್ಕುಗಳ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕ ಶಿವಶರಣಪ್ಪ ಎಸ್. ಸೂರಪುರ ಮಾತನಾಡಿ, “ಪ್ರತಿಯೊಬ್ಬರಿಗೂ ಸ್ವಾತಂತ್ರವಾಗಿ ಬದುಕುವ, ವಾಸಿಸುವ ಮತ್ತು ಸಮಾನತೆಯಿಂದ ಬದುಕುವ ಹಕ್ಕು ಇದೆ. ಜನಾಂಗಹಿಜಾತಿಹಿಧರ್ಮದ ಬೇಧ ಭಾವ ಸಮಾಜದಲ್ಲಿ ಸ್ಥಾನ ಪಡುವಂತಿಲ್ಲ,” ಎಂದರು.
ಸಂಗಮ ಸಂಸ್ಥೆ ನಿರ್ದೆಶಕ ಫಾದರ್ ಸಂತೋಷ್ ಮಾತನಾಡಿ, ವಿಶ್ವಸಂಸ್ಥೆಯು ಪ್ರತಿಯೊಬ್ಬ ಮನುಷ್ಯನಿಗೂ ಜೀವಿಸುವ ಹಕ್ಕು, ಭಾಗವಹಿಸುವ ಹಕ್ಕು ಹಾಗೂ ಸಮಾನತೆಯ ಹಕ್ಕನ್ನು ನೀಡಿದೆ. ಈ ಹಕ್ಕುಗಳನ್ನು ಕಾನೂನುಗಳ ಮೂಲಕ ಅನುಷ್ಠಾನಕ್ಕೆ ತರುವುದು ನಮ್ಮ ಸಂಯುಕ್ತ ಜವಾಬ್ದಾರಿ ಎಂದು ಹೇಳಿದರು.
ಸಿಸ್ಟರ್ ಸಿಂಥಿಯಾ ಅವರು ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಿಂದುತಾಯಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಸರಿತಾ ಹರಿಜನ, ರಶ್ಮಿಪ್ರಿಯಾ ಹಿವೈದ್ಯಾಧಿಕಾರಿ, ತಾಲೂಕಾ ಆಸ್ಪತ್ರೆ, ಸಿಂದಗಿ, ಶ್ರೀಮತಿ ರುಭಿನಾ ನದಾಪ್ಹಿ ಆಪ್ತ ಸಮಾಲೋಚಕಿ, ಹಾಗೂ ವಿವಿಧ ಗ್ರಾಮಗಳ ಮಹಿಳಾ ಸಂಘಗಳ ಸದಸ್ಯರು ಭಾಗವಹಿಸಿ ಮಾನವ ಹಕ್ಕುಗಳ ಕುರಿತ ಜಾಗೃತಿ ಪಡೆದರು. ಕಾರ್ಯಕ್ರಮವನ್ನು ತೇಜಸ್ವಿನಿ ಹಳ್ಳದಕೇರಿ ನಿರೂಪಿಸಿದರು. ವಿಜಯ ಭಂಟನೂರ ಸ್ವಾಗತಿಸಿದರು. ಉಮೇಶ್ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 