“ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ-2025”
ಧಾರವಾಡ 13: ಪ್ರತಿ ವರ್ಷದಂತೆ ವರಕವಿ ಡಾ.ದ.ರಾ.ಬೇಂದ್ರೆಯವರ ಜನ್ಮದಿನ 31ನೇ ಜನವರಿ 2025ರಂದು ದ.ರಾ.ಬೇಂದ್ರೆಯವರ ಹೆಸರಿನಲ್ಲಿ ನಾಡಿನ ಶ್ರೇಷ್ಠ ಕವಿ, ವಿಮರ್ಶಕ, ಸಾಹಿತಿಗೆ ನೀಡುತ್ತ ಬಂದಿರುವ “ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ”ಗೆ ನವೋದಯ ಸಾಹಿತ್ಯದ ಸ್ತ್ರೀ ಸಂವೇದನೆಯ ಸೃಜನಶೀಲ ಹಿರಿಯ ಲೇಖಕಿ ಡಾ. ವೀಣಾ ಶಾಂತೇಶ್ವರ, ಧಾರವಾಡ ಹಾಗೂ ಕವಿ, ವಿಮರ್ಶಕ, ಸಂಸ್ಕೃತಿ ಚಿಂತಕರಾದ ಪ್ರೊ. ಎಸ್.ಜಿ.ಸಿದ್ಧರಾಮಯ್ಯ, ಬೆಂಗಳೂರು ಇವರು ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯನ್ನು ದಿ. 31ರಂದು ನಗರದ ಬೇಂದ್ರೆ ಭವನದಲ್ಲಿ ಏರಿ್ಡಸಿರುವ ವರಕವಿ ಡಾ.ದ.ರಾ. ಬೇಂದ್ರೆಯವರ 129ನೇ ಜನ್ಮದಿನದಂದು ಪ್ರದಾನ ಮಾಡಲಾಗುವುದು. ಪ್ರಶಸ್ತಿ ಮೊತ್ತ ರೂ.1 ಲಕ್ಷ ನಗದು (ತಲಾ ಐವತ್ತು ಸಾವಿರ), ಪ್ರಶಸ್ತಿ ಫಲಕ, ಫಲ-ಪುಷ್ಪಗಳನ್ನೊಳಗೊಂಡಿರುತ್ತದೆ.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 