“ರಾಷ್ಟ್ರೀಯ ಯುವ ದಿನಾಚರಣೆ” ಕಾರ್ಯಕ್ರಮ
“National Youth Day” program
ಕೊಪ್ಪಳ 13: ತಾಲೂಕಿನ ಜಿ.ಟಿ.ಟಿ.ಸಿ. ಕಾಲೇಜು ದದೇಗಲ್-ಕೊಪ್ಪಳದಲ್ಲಿ ಶ್ರೀ ಸ್ವಾಮಿ ವಿವೇಕಾನಂದರ 164 ನೇ ಜಯಂತ್ಯೋತ್ಸವದ ಅಂಗವಾಗಿ “ರಾಷ್ಟ್ರೀಯ ಯುವ ದಿನಾಚರಣೆ” ಕಾರ್ಯಕ್ರವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಕೊಪ್ಪಳದ ನಿರ್ದೇಶಕರಾದ ರಮೇಶ ತುಪ್ಪದ ಇವರು ಉದ್ಘಾಟಿಸಿ ಯುವಕರು ಹೆಚ್ಚು ಹೆಚ್ಚು ಸಾಮಾಜಿಕ ಸೇವೆಯಲ್ಲಿ ತೊಡಗಿಕೊಳ್ಳಬೇಕು. ಹಾಗೂ ಪಠ್ಯೇತರ ಚಟುವಟಿಕೆಗಳಲ್ಲದೇ ಸಮಾಜಮುಖಿ ಕಾರ್ಯಗಳಲ್ಲಿ ಯಶಸ್ಸನ್ನು ಕಾಣಬೇಕೆಂದು ತಿಳಿಸಿದರು. ಕೊಪ್ಪಳ ರಾಮಕೃಷ್ಣ ಆಶ್ರಮದ ಶ್ರೀಗಳಾದ ಪರಮ ಪೂಜ್ಯ ಶ್ರೀ ಚೈತನ್ಯಾನಂದ ಸ್ವಾಮಿಜಿಗಳು ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ತತ್ವಾದರ್ಶನಗಳನ್ನು ಬೋಧಿಸಿ ಆರ್ಶಿವಚನವನ್ನು ನೀಡಿದರು.
ಮುಖ್ಯ ಅತಿಥಿಗಳಾದ ಡಾಽಽಪರ್ವತಗೌಡ ಹಿರೇಗೌಡ್ರ ಜಿಲ್ಲಾ ಆಯುಷ್ ಅಧಿಕಾರಿಗಳು, ಕೊಪ್ಪಳ ಇವರು ವಿದ್ಯಾರ್ಥಿಗಳಿಗೆ ಯುವ ಜನತೆಯ ಕುರಿತು ಜಾಗೃತಿಯ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿಗಳಾದ ಮೌನೇಶ ರಾಠೋಡ್ , ಪ್ರಾಂಶುಪಾಲರಾದ ಪ್ರಭುರಾಜ ಜಿ. , ರೆಡ್ ಕ್ರಾಸ್ ಸಂಸ್ಥೆಯ ಪಿ.ಆರ್.ಓ. ದೇವೆಂದ್ರ್ಪ ಹಿಟ್ನಾಳ, ಯುವ ರೆಡ್ ಕ್ರಾಸ್ ಸಂಯೋಜಕರಾದ ಗುದ್ನೇಶ ಭಾವಳ್ಳಿ, ಕಾಲೇಜಿನ ಬೋಧಕರು ಹಾಗೂ ವಿದ್ಯಾರ್ಥಿಗಳು, ಭಾಗವಹಿಸಿದ್ದರು. ದೇವೆಂದ್ರ್ಪ ಹಿಟ್ನಾಳ ಕಾರ್ಯಕ್ರಮವನ್ನು ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 